Sunday, June 8, 2025

ಅಧಿಕಾರಿಗಳು ಸರ್ವಾಧಿಕಾರಿಗಳಲ್ಲ : ವಿನಯ ಕುಮಾರ್‌ ಸೊರಕೆ

ಹೆಬ್ರಿ: ಶಿರ್ಲಾಲು ಗ್ರಾ.ಪಂ. ಅಲ್ಲಿ ಕಡತಗಳು ಕಳವಾಗಿದೆ ಎಂದು ಕಾಂಗ್ರೆಸ್‌ ಬೆಂಬಲಿತ ಸದಸ್ಯರ ವಿರುದ್ಧ ತನಿಖೆ ನಡೆಸದೇ, ಒತ್ತಡಕ್ಕೆ ಮಣಿದು ಏಕಾಏಕಿ ಕೇಸು ದಾಖಲಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಿಯಲ್ಲ. ಇದು ಅಧಿಕಾರಿಗಳ ಮೂಲಕ ಪ್ರತಿಪಕ್ಷವನ್ನು ಧಮನ ಮಾಡುವ ತಂತ್ರ ಮತ್ತು ರಾಜಕೀಯ ಷಡ್ಯಂತ್ರ. ಅಧಿಕಾರಿಗಳು ಸರ್ವಾಧಿಕಾರಿಗಳಲ್ಲ. ಶಿರ್ಲಾಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಒತ್ತಾಯಿಸಿದರು.

ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶಿರ್ಲಾಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಗುರುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವ್ಯವಸ್ಥೆ ಹೀಗೆಯೇ ಇರುವುದಿಲ್ಲ. ಬದಲಾವಣೆಗಳು ಆಗುತ್ತಿರುತ್ತದೆ. ಅಧಿಕಾರಿಗಳು ಎಂದೂ ಸುಪ್ರೀಂ ಅಲ್ಲ. ಕಾನೂನು ಅರಿತು ಕೆಲಸ ಮಾಡಲಿ ಪಂಚಾಯಿತಿ ಸದಸ್ಯರಿಗೆ ತೊಂದರೆಯಾದರೇ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಕಾರ್ಕಳ ಕ್ಷೇತ್ರ ಮತ್ತು ಶಿರ್ಲಾಲು ಗ್ರಾ.ಪಂ. ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ತೀವ್ರ ಹೋರಾಟ ನಡೆಸುತ್ತೇವೆ. ಪಂಚಾಯಿತಿ ಸದಸ್ಯರ ವಿರುದ್ಧ ನಡೆಸುತ್ತಿರುವ ಷಡ್ಯಂತ್ರವನ್ನು ಸಹಿಸುವುದಿಲ್ಲ. ಕಾಂಗ್ರೆಸ್‌ ಬೆಂಬಲಿತ ಸದಸ್ಯರನ್ನು ಸುಳ್ಳು ಕೇಸು ಹಾಕಿಸಿ ಸಿಲುಕಿಸುವ ಷಡ್ಯಂತ್ರ ಎಂದು ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.

ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗೆ ಮತ್ತು ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಸದಸ್ಯ ರಾಘವ ದೇವಾಡಿಗ, ಸ್ಥಳೀಯ ಮುಖಂಡ ಕೆರ್ವಾಸೆ ಪ್ರಕಾಶ ಪೂಜಾರಿ, ಶಿರ್ಲಾಲು ಕಾಂಗ್ರೆಸ್‌ ಅಧ್ಯಕ್ಷ ಜಯ ಕುಮಾರ್‌, ಗ್ರಾಮಸ್ಥರು, ಸ್ಥಳೀಯ ಪ್ರಮುಖರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles