Sunday, June 8, 2025

ಪೋಷಕರು ಜವಾಬ್ದಾರಿಯುತವಾಗಿ ವರ್ತಿಸಬೇಕು: ಎಸ್.ಎಸ್ ಕಾಮತ್

ಕಾರ್ಕಳ: ತಾಲೂಕಿನ ಗಾಂಧಿ ಮೈದಾನದಲ್ಲಿರುವ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಶಿಕ್ಷಕ-ರಕ್ಷಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಇಂದು ನಡೆಯಿತು.

ಮಂಗಳೂರಿನ ಎಕ್ಷ್‌ಪರ್ಟ್ ಸಂಸ್ಥೆಯ ಸಂಸ್ಥಾಪಕ ಎಸ್.ಎಸ್ ಕಾಮತ್ ಮಾತನಾಡಿ ಪೋಷಕರ ಅತಿಯಾದ ಮಮತೆ, ಪ್ರೀತಿಯು ಮಕ್ಕಳನ್ನು ದಾರಿ ತಪ್ಪಿಸುವಂತೆ ಮಾಡುತ್ತದೆ. ಆದ್ದರಿಂದ ಪೋಷಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಪೋಷಕರಲ್ಲಿ ಗಂಡು ಹೆಣ್ಣು ಎಂಬ ಭೇದ ಭಾವ ಇರಬಾರದು. ಮಕ್ಕಳನ್ನು ಆಸ್ತಿಯಾಗಿಸುವುದು ಪೋಷಕರ ಜವಬ್ದಾರಿ ಎಂದು ಹೇಳಿದರು.

ಉಡುಪಿಯ ವೈಕುಂಠ ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಮಾತನಾಡಿ ಮಕ್ಕಳ ದುರ್ವ್ಯಸನಗಳು, ಮೊಬೈಲ್ ಚಟ ಇತ್ಯಾದಿಗಳನ್ನು ನಿಯಂತ್ರಿಸಲು ಅನುಸರಿಸಬೇಕಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿವೇಕಾನಂದ ಶೆಣೈ, ಪ್ರಾಂಶುಪಲ ಲಕ್ಷ್ಮೀ ನಾರಾಯಣ ಕಾಮತ್ ಪ್ರಸ್ತಾವಿಕವಾಗಿ ಮಾತನಾಡಿದರು.

ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮೇರಿಯನ್ ಡಿ’ಸೋಜ, ಪ್ರಾಥಮಿಕ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಉಮಾ ಫ್ರಾನ್ಸಿಸ್ ಇನ್ನಿತರು ಉಪಸ್ಥಿತರಿದ್ದರು.

ಉಪನ್ಯಾಸಕ ಅರುಣ್ ಸಂದೀಪ್ ಡಿ’ಸೋಜ, ನಯನಾ ಸಹಕರಿಸಿದರು. ಸುನೀತಾ ಸ್ವಾಗತಿಸಿ, ಕಾವ್ಯಾ ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles