Saturday, June 7, 2025

ಮೇಕೆದಾಟು ಪಾದಯಾತ್ರೆ ಕುರಿತ ಪಿಐಎಲ್ ಪ್ರಶ್ನೆ:ಜ.೧೪ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ಇದೀಗ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಈ ಸಂದರ್ಭದಲ್ಲಿ ಹೀಗೆ ಪಾದಯಾತ್ರೆ ಮಾಡುವ ಅವಶ್ಯಕತೆಯಾದರೂ ಏನು ಎಂದು ಪ್ರಶ್ನಿಸಿ ಪಿಐಎಲ್ ನೀಡಿದ್ದ ದೂರನ್ನು ಕೈಗೆತ್ತಿಕೊಂಡ ಹೈಕೋರ್ಟ್ ಇದೀಗ ವಿಚಾರಣೆಯ ಗಡುವನ್ನು ಜನವರಿ ೧೪ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು ಈ ವೇಳೆ ಮಹಾಮಾರಿಯ ತಡೆಗೆ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ. ಇದರ ವಿರುದ್ಧವಾಗಿ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಹೈಕೋರ್ಟ್ ಕೊರೊನಾ ಅಟ್ಟಹಾಸದ ಈ ಸಂದರ್ಭ ಮೇಕೆದಾಟು ಪಾದಯಾತ್ರೆ ಕೈಗೊಂಡಿರುವುದಕ್ಕೆ ಕೆಪಿಸಿಸಿ ವಿರುದ್ಧ ಕಿಡಿಕಾರಿದ್ದು, ಇದನ್ನು ತಡೆಯಲು ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ಮೇಲೂ ಕೂಡ ಗರಂ ಆಗಿದೆ. ಇದರ ವಿರುದ್ಧ ಕ್ರಮಕೈಗೊಳ್ಳದೇ ಇರುವ ಕುರಿತಂತೆ ಉತ್ತರ ನೀಡಲು ಸರ್ಕಾರಕ್ಕೆ ಜನವರಿ ೧೪ರಂದು ಗಡುವನ್ನು ನೀಡಿದೆ. ಅಲ್ಲದೇ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೂ ಈ ಕುರಿತ ಸಂಪೂರ್ಣ ಮಾಹಿತಿ ನೀಡಲು ಸೂಚನೆ ನೀಡಿದೆ.


ಕೊರೊನಾ ಮೂರನೇ ಅಲೆಯ ಈ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ಕೈಗೊಂಡಿರುವುದು ಅಸಂಭವನೀಯ. ಈಗಾಗಲೇ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಹಲವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಾಸ್ಕ್ ಇಲ್ಲದೆಯೇ ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವ ಈ ಪಾದೆಯಾತ್ರೆಯಿಂದ ಕೊರೊನಾ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಹೈಕೋರ್ಟ್ ನೀಡಿರುವ ಡೆಡ್‌ಲೈನ್‌ನಂದು ಕೆಪಿಸಿಸಿ ಹಾಗೂ ರಾಜ್ಯ ಸರ್ಕಾರ ನೀಡುವ ಉತ್ತರಕ್ಕಾಗಿ ಎಲ್ಲರೂ ಕಾದು ನೋಡಬೇಕಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles