ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು 62 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿಎಂ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು, ಅವರು ಕರ್ನಾಟಕದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಮತ್ತು ಬಡವರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಅವರ ದೀರ್ಘ ಮತ್ತು ಆರೋಗ್ಯಕರ ಭವಿಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇನ್ನು, ಸಿಎಂ ಹುಟ್ಟು ಹಬ್ಬಕ್ಕೆ ಸಿನಿಮಾ ರಂಗದವರು, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.