ಉಡುಪಿ: ಮಲ್ಪೆ ಕೇಂದ್ರ ಕಚೇರಿಯಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿಯವರಿಗೆ ಮೈಸೂರು ವಿವಿ ಪಿ.ಹೆಚ್.ಡಿ ಪದವಿಯನ್ನು ನೀಡಿದೆ.
ಇವರು ಕರ್ನಾಟಕ ಮುಕ್ತ ವಿವಿಯ ಪ್ರೊಪೆಸರ್ ಡಾ. ಮಹಾದೇವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ ಒಂದು ಅಧ್ಯಯನ” ವಿಷಯದ ಕುರಿತ ಮಹಾ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿಯನ್ನು ನೀಡಲಾಗಿದೆ.