Sunday, June 8, 2025

ರಾಜಕೀಯ ಅಂದ್ರೆ ಮಂತ್ರಿ ಆಗುವುದಲ್ಲ, ಜನಸೇವೆ ಮಾಡುವುದು: ಬಿ.ಕೆ.ಹರಿಪ್ರಸಾದ್

ಸುಳ್ಯ: ಸುಳ್ಯ ತಾಲೂಕಿನ ಅರಂತೋಡ್ ಗ್ರಾಮದಲ್ಲಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಅಸೋಸಿಯೇಶನ್‌ನ ನೇತೃತ್ವದಲ್ಲಿ ಅರಂತೋಡಿನ ಉದಯನಗರದಲ್ಲಿ ನೂತನವಾಗಿ ನಿರ್ಮಿಸಿದ ಅನ್ವಾರುಲ್ ಹುಧಾ ಶಾದಿಮಹಲ್ ಉದ್ಘಾಟನೆಯನ್ನು ನೆರವೇರಿಸಲಾಯಿತು. ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ರಾಜಕೀಯ ಎಂದರೆ ಮಂತ್ರಿ, ಎಂಎಲ್‌ಎ ಆಗುವುದಲ್ಲ. ರಾಜಕೀಯ ಎಂದರೆ ಅದು ಜನಸೇವೆ. ಜನರ ಸೇವೆ ಮಾಡುವುದು, ಬಡವರ ಆಶಾಕಿರಣ ಆಗುವುದೇ ನಿಜವಾದ ರಾಜಕೀಯ ಎಂದು ಹೇಳಿದರು.
ಇನ್ನು ಮುಂದುವರಿದು, ಎಲ್ಲಾ ಧರ್ಮಗಳಿಗೂ ಅವರದ್ದೇ ಆದ ಗ್ರಂಥಗಳು ಇದೆ. ಆದರೆ ಸ್ವತಂತ್ರ ಭಾರತದಲ್ಲಿ ಸಂವಿಧಾನ ಎಲ್ಲರ ಗ್ರಂಥ. ಸಂವಿಧಾನದಿAದ ಈ ದೇಶ ಸದೃಢವಾಗಿ ಉಳಿದಿದೆ. ಆದುದರಿಂದ ಸಂವಿಧಾನವನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದರು.
ಇನ್ನು, ನೂತನ ಸಭಾಂಗಣವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ಮಾತನಾಡಿ, ‘ಸಮಾಜ ಕಟ್ಟಲು ಎಲ್ಲರ ಸಹಕಾರ ಬೇಕು, ಎಲ್ಲರೂ ಒಂದಾಗಿ ಶಾಂತಿ, ಸೌಹಾರ್ಧತೆಯಿಂದ ಬಾಳಿದಾಗ ನಾಡು ಸರ್ವ ಜನಾಂಗದ ಶಾಂತಿಯ ತೋಟ ಆಗಲು ಸಾಧ್ಯ ಎಂದರು. ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಸುದೀರ್ಘ ಕಾಲ ಅತ್ಯುತ್ತಮ ಸೇವಾ ಕಾರ್ಯದ ಮೂಲಕ ಜನ ಸೇವೆ ಮಾಡಿದೆ ಎಂದು ಅವರು ಶ್ಲಾಘಿಸಿದರು.
ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಅಲ್‌ಹಾಜ್ ಇಸಾಕ್ ಬಾಖವಿ ದುವಾಃ ನೆರವೇರಿಸಿದರು. ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್‌ನ ಗೌರವಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಅಲ್ಪ ಸಂಖ್ಯಾತ ಕಾಂಗ್ರೆಸ್‌ನ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ಮಾಜಿ ಹೆಚ್ಚುವರಿ ಎಡ್ವಕೇಟ್ ಜನರಲ್ ಪೊನ್ನಣ್ಣ, ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ.ವೆAಕಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles