ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಮತ್ತು ಕಾರಿಂಜ ಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಕಾರಿಂಜ ಕ್ಷೇತ್ರದ ಸಂರಕ್ಷಣೆ ಮತ್ತು ಪಾವಿತ್ರ್ಯತೆ ಉಳಿಸುವ ನಿಟ್ಟಿನಲ್ಲಿ ಜನಾಂದೋಲನ ನಡೆಸಲು 4ನೇ ಹಂತದ ಹೋರಾಟ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಹಿಂದೂ ಜಾಗರಣೆ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.
ಬಿ.ಸಿ.ರೋಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.27ರಂದು ಶಿವ ಮಾಲಾಧಾರಣೆ ಮತ್ತು ವೃತಾಚಾರಣೆಯೊಂದಿಗೆ ಕೋಟಿ ನಾಮ ಸಂಕೀರ್ತನೆ ಸಹಿತ ಮಾ.1ರಂದು ಕಾರಿಂಜ ಯಾತ್ರೆ ಕೈಗೊಳ್ಳಲಾಗುವುದು. ಕ್ಷೇತ್ರದ ಪರಿಸರದಲ್ಲಿ ನಡೆಯತ್ತಿದ್ದ ಅಕ್ರಮ ಗಣಿಗಾರಿಕೆ ಸ್ಥಗಿತಗೊಂಡಿದ್ದು, ಮುಂದಿನ ದಿನಗಳಲ್ಲಿ ಗಣಿಗಾರಿಕೆ ಶಾಶ್ವತ ಸ್ಥಗಿತಗೊಳಿಸಬೇಕು ಎಂಬುದು ನಮ್ಮ ಅಪೇಕ್ಷೆ. ಈ ಬಗ್ಗೆ ಹಿಂದೂ ಸಮಾಜದ ಸ್ಥಳೀಯ ಭಜನಾ ಮಂದಿರ, ದೇವಸ್ಥಾನ ಅಥವಾ ಮನೆಯಲ್ಲೇ 108 ಬಾರಿ ಶಿವನಾಮ ಜಪಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಜಗದೀಶ್ ನೆತ್ತರಕರೆ, ರಾಜೇಶ್ ಬೊಳ್ಳುಕಲ್ಲು, ನರಸಿಂಹ ಮಾಣಿ ,ಪ್ರಶಾಂತ್ ಕೆಂಪುಗುಡ್ಡೆ ಉಪಸ್ಥಿತರಿದ್ದರು.