ರಾಜ್ಯದಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಸರಳೀಕೃತ ಪಿಯು ಪರೀಕ್ಷೆ ಮಾಡಲು ಮುಂದಾಗಿದೆ. ಇದರಿಂದ ಪಿಯು ವಿದ್ಯಾರ್ಥಿಗಳಿಗೆ ಕೊಂಚ ಸಮಾಧಾನ ಸಿಕ್ಕಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಿನ್ನೆಯಷ್ಟೇ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಮಾಡಿತ್ತು. ಇದೀಗ ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಳೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೋನಾದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆ ಸಂಪೂರ್ಣವಾಗಿ ಆಗಿಲ್ಲ. ಆದ್ದರಿಂದ ಶಿಕ್ಷಣ ಇಲಾಖೆ ಸರಳೀಕೃತ ಪರೀಕ್ಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಯೋಜನೆ ರೂಪಿಸಿದ್ದು, ಪಿಯು ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ಇದರ ಅನುಸಾರ ಪರೀಕ್ಷೆಯಲ್ಲಿ ಹೆಚ್ಚಾಗಿ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಚಿಂತನೆ ನಡೆಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯು ಪ್ರಥಮ ಹಾಗೂ ದ್ವಿತೀಯ ಪರೀಕ್ಷಾ ಪಠ್ಯವನ್ನು ಸಹ ಕಡಿತ ಮಾಡಿದ್ದು, ಶೇ 30ರಷ್ಟು ಭಾಷಾ ವಿಷಯದಲ್ಲಿ ಪರೀಕ್ಷಾ ಪಠ್ಯ ಕಡಿತಗೊಳಿಸಿದೆ. ಹಾಗೂ ಕೇವಲ 70% ರಷ್ಟು ಪಠಕ್ಕೆ ಮಾತ್ರ ಪಿಯು ಪ್ರಥಮ ಹಾಗೂ ದ್ವೀತಿಯ ಪರೀಕ್ಷೆ ನಡೆಸಲು ಮುಂದಾಗಿದೆ. ನಿನ್ನೆ ಪ್ರಕಟವಾದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 16ರಿಂದ ಮೇ 4 ರವರೆ ಪಿಯು ವಾಷಿರ್ಕ ಪರೀಕ್ಷೆ ನಡೆಯಲಿದೆ.