ಮಲ್ಪೆ: ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಬಂದಿದ್ದ ಕೇರಳ ರಾಜ್ಯದ ಕಾಲೇಜೊಂದರ ವಿದ್ಯಾರ್ಥಿಗಳಿಗೆ ಸ್ಥಳೀಯರ ತಂಡ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಹಲ್ಲೆಯಿಂದ ಕಾಲೇಜಿನ ಉಪನ್ಯಾಸಕ ಸೇರಿ ಹಲವು ಮಂದಿ ಗಾಯಗೊಂಡಿದ್ದು, ನಾಲ್ಕೈದು ಮಂದಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಕೇರಳದ ಮಲ್ಲಪುರಂ ಜಿಲ್ಲೆಯ ಖಾಸಗಿ ಕಾಲೇಜಿನ ಸುಮಾರು ನಾಲ್ವರು ಉಪನ್ಯಾಸಕರು ಹಾಗೂ 37 ಮಂದಿ ಮಾ.3ರಂದು ಉಡುಪಿಗೆ ಪ್ರವಾಸಕ್ಕೆ ಬಂದಿದ್ದರು. ಕೊಲ್ಲೂರು ಕೊಡಚಾದ್ರಿ ಮುಗಿಸಿ ಮಲ್ಪೆ ಬೀಚ್ಗೆ ಬಂದ ಇವರು, ಬೋಟಿನಲ್ಲಿ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಿದ್ದರು. ಅಲ್ಲಿ ವಿವಾಹ ಕಾರ್ಯಕ್ರಮ ಮುಗಿಸಿ ಬೋಟಿನಲ್ಲಿ ತೀರಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಬೋಟಿನಿಂದ ಇಳಿಯುವಾಗ ವಿದ್ಯಾರ್ಥಿಗಳು ಮತ್ತು ಬೋಟಿನವರ ಮಧ್ಯೆ ಮಾತಿನ ಚಕಮಕಿ ನಡೆದು, ಇದು ವಿಕೋಪ ತಿರುಗಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ವೇಳೆ ಸ್ಥಳೀಯರು ಸುಮಾರು 50 ಮಂದಿ ಸೇರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಎರಡು ತಂಡದವರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಬಳಿಕ ರಾಜಿ ಮೂಲಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು ಮತ್ತು ಬೋಟಿನವರ ಮಧ್ಯೆ ಮಾರಾಮಾರಿ; ವಿದ್ಯಾರ್ಥಿಗಳಿಗೆ ಗಾಯ
Subscribe
Login
0 Comments