ಸುಳ್ಯ: ಮನೆಗೆ ನುಗ್ಗಿ ಮಾನಸಿಕ ಅಸ್ವಸ್ಥೆಯ ಮಾನಭಂಗ ಮಾಡಿ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಳಂಜ ಗ್ರಾಮದ ಕೋಟೆ ಮುಂಡುಗಾರು ನಿವಾಸಿ ಸುಬ್ರಮಣ್ಯನಿಗೆ ಎರಡು ವರ್ಷ ಸಾದಾ ಜೈಲುಶಿಕ್ಷೆ, 10 ಸಾವಿರ ರೂಗಳ ದಂಡ, ದಂಡ ತೆರಲು ವಿಫಲವಾದಲ್ಲಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ ಎ. ತೀರ್ಪು ನೀಡಿದ್ದಾರೆ.
ಪ್ರಕರಣ ಹಿನ್ನಲೆ:
ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಎಂಬಲ್ಲಿ 2015 ಜ.11ರಂದು ಮಾನಸಿಕ ಅಸ್ವಸ್ಥ ಮಹಿಳೆಯೋರ್ವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆ ಒಳಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿ ಸುಬ್ರಮಣ್ಯ ಮಹಿಳೆಯ ಮಾನಭಂಗ ಮಾಡಿ ಜೀವ ಬೆದರಿಕೆ ಒಡ್ಡಿದ್ದ ಎಂಬ ಆರೋಪದ ಮೇಲೆ ಆತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.