ನವದೆಹಲಿ: ಗಣರಾಜ್ಯೋತ್ಸವದಂದು ನಡೆದ ಪರೇಡ್ ನಲ್ಲಿ ಪ್ರದರ್ಶಿಸಿದ ಸ್ತಬ್ಧಚಿತ್ರ ಹಾಗೂ ಅತ್ಯುತ್ತಮ ಮೆರವಣಿಗೆ ಸ್ಪರ್ಧೆಯ ಫಲಿತಾಂಶ ಘೋಷಿಸಲಾಗಿದ್ದು, ಕರ್ನಾಟಕದ ‘ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ವಿಷಯ ಆಧಾರಿತವಾದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಲಭಿಸಿದೆ.


ಗಣರಾಜ್ಯೋತ್ಸವದಂದು ನಡೆದ ಪರೇಡ್ ನಲ್ಲಿ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ತಬ್ಧಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಇದರಲ್ಲಿ ಉತ್ತರಪ್ರದೇಶದ ‘ಒಂದು ಜಿಲ್ಲೆ ಒಂದು ಉತ್ಪನ್ನ ಮತ್ತು ಕಾಶಿ ವಿಶ್ವನಾಥ ಧಾಮ’ ವಿಷಯಾಧಾರಿತವಾದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ ದೊರೆತಿದೆ. ಮೇಘಾಲಯದ ’50 ವರ್ಷಗಳ ರಾಜತ್ವ ಮತ್ತು ಮಹಿಳಾ ನೇತೃತ್ವದ ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಸಂಘಗಳಿಗೆ ರಾಜತ್ವದ ಕೊಡುಗೆ’ ವಿಷಯಾಧಾರಿತ ಸ್ತಬ್ಧಚಿತ್ರಕ್ಕೆ ಮೂರನೇ ಸ್ಥಾನ ಲಭಿಸಿದೆ.