ಕಾರ್ಕಳ: ಹಿಜಾಬ್ ವಿವಾದ ವಿಚಾರವಾಗಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಸೋಮವಾರದಿಂದ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಿಸಲು ಸೂಚಿಸಿದೆ. ಈ ಹಿನ್ನೆಲೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಶುಕ್ರವಾರ ಕಾರ್ಕಳದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.



ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಧರ್ಮವನ್ನು ಸೂಚಿಸುವ ಉಡುಗೆಯನ್ನು ತೊಡಬಾರದು ಎಂದು ಮಧ್ಯಂತರ ಆದೇಶ ನೀಡಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ ತುಂಬುವ ಉದ್ದೇಶದೊಂದಿಗೆ ಪೊಲೀಸ್ ಇಲಾಖೆ ಕಾರ್ಕಳ, ಹೆಬ್ರಿ, ಅಜೆಕಾರು ವ್ಯಾಪ್ತಿಯಲ್ಲಿ ರೂಟ್ ಮಾರ್ಚ್ ನಡೆಸಿದೆ.
ರೂಟ್ ಮಾರ್ಚ್ ನಲ್ಲಿ ಡಿವೈಎಸ್ಪಿ ವಿಜಯ್ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ ಕುಮಾರ್, ಟೌನ್ ಪಿಎಸ್ಐ ಪ್ರಸನ್ನ, ರೂರಲ್ ಪಿಎಸ್ಐ ತೇಜಸ್ವಿ, ಅಜೆಕಾರ್ ಪಿಎಸ್ಐ ಸುದರ್ಶನ್, ಹೆಬ್ರಿ ಪಿಎಸ್ಐ ಮಹೇಶ್ ಹಾಗೂ ಇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.