ಸುರತ್ಕಲ್: ಸಿ.ಎಸ್.ಆರ್ ನೇತೃತ್ವದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಣ ಮತ್ತು ಮಹಿಳಾ ಸಬಲೀಕರಣ ಯೋಜನೆಯಡಿ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಂಗಳೂರು ಶಾಖೆ ವತಿಯಿಂದ ಸುರತ್ಕಲ್ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಯೋಜನೆಯ ಪ್ರತಿಫಲವನ್ನು ಸುಮಾರು 70 ವಿದ್ಯಾರ್ಥಿನಿಯರು ಪಡೆದುಕೊಂಡರು. ಹಾಗೇಯೆ ಕರ್ನಾಟಕದಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನ ಬೇರೆ-ಬೇರೆ ಶಾಖೆಗಳು ಈ ಯೋಜನೆಯನ್ನು ಮುಂದುವರಿಸಲಿದ್ದಾರೆ.