ಬೆಂಗಳೂರು: ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆಗಳನ್ನು ಆರಂಭ ಮಾಡುತ್ತೇವೆ. ಈ ಬಾರಿ ಶಾಲೆಯಲ್ಲಿ ಹಾಜರಾತಿ ಕಡ್ಡಾಯವಿಲ್ಲ. ಪರೀಕ್ಷೆಗೂ ಶೇಕಡ 75 ರಷ್ಟು ಹಾಜರಾತಿ ಕಡ್ಡಾಯ ಮಾಡುವುದಿಲ್ಲವೆಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.
ನಿಗದಿ ಪಡಿಸಿದ ದಿನಾಂಕಗಳಂದೇ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತದೆ. ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ಪ್ರಾರಂಭಿಸುವುದರ ಕುರಿತು ತಜ್ಞರ ಸಲಹೆ ಪಡೆದು ಶಾಲೆಗಳನ್ನು ಆರಂಭಿಸಲು ನಿರ್ಧಾರ ಮಾಡುತ್ತೇವೆ. ಒಂದು ವೇಳೆ 1 ರಿಂದ 9 ನೇ ತರಗತಿಗಳನ್ನು ಆರಂಭಿಸಲು ಸಾಧ್ಯವಾಗದೇ ಇದ್ದಲ್ಲಿ, 5 ರಿಂದ 9 ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ತಜ್ಞರು ಒಪ್ಪಿಗೆ ನೀಡಿದಲ್ಲಿ ಸೋಮವಾರದಿಂದ ಶಾಲೆಗಳನ್ನು ಆರಂಭ ಮಾಡುತ್ತೇವೆ ಎಂದು ಸಚಿವ ಬಿಸಿ ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.