Sunday, June 8, 2025

ತಜ್ಞರ ಸಲಹೆ ಮೇರೆಗೆ ಸೋಮವಾರದಿಂದ ಶಾಲೆ ಆರಂಭ: ಸಚಿವ ಬಿಸಿ ನಾಗೇಶ್

ಬೆಂಗಳೂರು: ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆಗಳನ್ನು ಆರಂಭ ಮಾಡುತ್ತೇವೆ. ಈ ಬಾರಿ ಶಾಲೆಯಲ್ಲಿ ಹಾಜರಾತಿ ಕಡ್ಡಾಯವಿಲ್ಲ. ಪರೀಕ್ಷೆಗೂ ಶೇಕಡ 75 ರಷ್ಟು ಹಾಜರಾತಿ ಕಡ್ಡಾಯ ಮಾಡುವುದಿಲ್ಲವೆಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ನಿಗದಿ ಪಡಿಸಿದ ದಿನಾಂಕಗಳಂದೇ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತದೆ. ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ಪ್ರಾರಂಭಿಸುವುದರ ಕುರಿತು ತಜ್ಞರ ಸಲಹೆ ಪಡೆದು ಶಾಲೆಗಳನ್ನು ಆರಂಭಿಸಲು ನಿರ್ಧಾರ ಮಾಡುತ್ತೇವೆ. ಒಂದು ವೇಳೆ 1 ರಿಂದ 9 ನೇ ತರಗತಿಗಳನ್ನು ಆರಂಭಿಸಲು ಸಾಧ್ಯವಾಗದೇ ಇದ್ದಲ್ಲಿ, 5 ರಿಂದ 9 ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ತಜ್ಞರು ಒಪ್ಪಿಗೆ ನೀಡಿದಲ್ಲಿ ಸೋಮವಾರದಿಂದ ಶಾಲೆಗಳನ್ನು ಆರಂಭ ಮಾಡುತ್ತೇವೆ ಎಂದು ಸಚಿವ ಬಿಸಿ ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles