Sunday, June 8, 2025

ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆಗಳು ಬಂದ್

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ ಎರಡು ಲಕ್ಷ ಸಮೀಪಕ್ಕೆ ಬಂದಿದ್ದು, ದಿನೇ ದಿನೇ ಕೋವಿಡ್ ವೇಗವಾಗಿ ಹರಡುತ್ತಿದೆ. ಈ ಮಧ್ಯೆ ಮಕ್ಕಳಲ್ಲೂ ಸೋಂಕು ಹೆಚ್ಚಾಗಿದೆ. ಇದರಿಂದ ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಮೂಡಿದೆ. ಕೋವಿಡ್ ಮಕ್ಕಳಲ್ಲಿ ಹರಡುವುದನ್ನು ತಡೆಯುವುದಕ್ಕಾಗಿ ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲು ಇಲಾಖೆಯು ಆದೇಶ ಹೊರಡಿಸಿದೆ.

ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ 1 ರಿಂದ 9 ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಟಫ್‌ ರೂಲ್ಸ್‌ ಜಾರಿ ಮಾಡಲು ನಿರ್ಧರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ತಜ್ಞರ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಾಸಿಟಿವ್ ಪ್ರಕರಣಗಳು, ಆಸ್ಪತ್ರೆಗೆ ಸೇರುವವರು, ಮಕ್ಕಳ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆ ಚರ್ಚೆಯು ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles