ಉಡುಪಿ: ಉಡುಪಿಯಲ್ಲಿ ಹೊತ್ತಿದ ಹಿಜಾಬ್ ವಿವಾದದ ಕಿಡಿ ಇಡೀ ಕರ್ನಾಟಕ ವ್ಯಾಪಿಸಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಶಿಕ್ಷಣ ಸಂಸ್ಥೆಗಳು ನಾಳೆಯಿಂದ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.
ಫೆ.14 ರಿಂದ ಫೆ.19 ವರೆಗೆ ನಿಷೇದಾಜ್ಞೆ ಜಾರಿಯಲ್ಲಿದ್ದು, ಈ ವೇಳೆ ಶಾಲೆಯ ಅಕ್ಕಪಕ್ಕ ಗುಂಪು ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಮಾಡುವಂತಿಲ್ಲ. ಯಾವುದೇ ವ್ಯಕ್ತಿ ಅಥವಾ ಧರ್ಮದ ಪರ ನಡೆದುಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಆದೇಶ ಮಾಡಲಾಗಿದೆ.