ಲಖನೌ: ಪಕ್ಷದ ವಿರುದ್ಧ ಬಂಡಾಯ ಘೋಷಿಸಿದ್ದ 23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್ ಸಿಬಲ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಕಪಿಲ್ ಸಿಬಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಹೌದು, ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಲಕ್ನೋದಲ್ಲಿ ಎಸ್ಪಿ ಮುಖ್ಯಸ್ಥರ ಸಮ್ಮುಖದಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದರು. ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ಹಿರಿಯ ನಾಯಕ ಸೇರಬಹುದು ಎಂಬ ಊಹಾಪೋಹಗಳು ಇತ್ತೀಚೆಗೆ ಹರಡಿತ್ತು. ಇದೀಗ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕಪಿಲ್ ಸಿಬಲ್
Subscribe
Login
0 Comments