Saturday, June 7, 2025

ಹಿಜಾಬ್‌ ತೀರ್ಪಿಗೆ ಅಸಮಾಧಾನ: ಮುಸ್ಲಿಂ ಸಮುದಾಯದವರ ಅಂಗಡಿಗಳು ಬಂದ್

ಕುಂದಾಪುರ: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪುಗೆ ಅಸಮಾಧಾನ ವ್ಯಕ್ತ ಪಡಿಸಿ ವಿವಿಧ ಮುಸ್ಲಿಂ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್‌ ಕರೆಗೆ ಕುಂದಾಪುರ, ಬೈಂದೂರು ತಾಲೂಕಿನ ಮುಸ್ಲಿಂ ಸಮುದಾಯದವರ ಅಂಗಡಿಗಳನ್ನು ಮುಚ್ಚಲಾಗಿತ್ತು.

ಕುಂದಾಪುರ ನಗರದಲ್ಲಿ ಮುಸ್ಲಿಂ ಸಮುದಾಯದ ಮಾಲೀಕತ್ವದ ಮಟನ್, ಚಿಕನ್ ಸ್ಟಾಲ್, ಹಣ್ಣಿನಂಗಡಿ, ಚಪ್ಪಲಿಯಂಗಡಿ, ಫ್ಯಾನ್ಸಿ ಸ್ಟೋರ್‌ಗಳು ಗುರುವಾರ ಬೆಳಗ್ಗೆಯಿಂದಲೇ ಬಂದ್ ಮಾಡಲಾಗಿದೆ. ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದಾರೆ.

ಅತೀ ಹೆಚ್ಚು ಮುಸ್ಲಿಂ ವರ್ತಕರಿರುವ ಗಂಗೊಳ್ಳಿಯಲ್ಲೂ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles