Saturday, June 7, 2025

ಕೆಎಂಎಫ್ ನಿಂದ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವ

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಅಭಿಮಾನಿಗಳು ಅವರ ಹೆಸರಿನಲ್ಲಿ ಹಲವಾರು ಒಳ್ಳೆಯ ಕೆಲಸಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಕೆಎಂಎಫ್ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಭಾವಚಿತ್ರವನ್ನು ನಂದಿನ ಹಾಲಿನ ಪ್ಯಾಕೆಟ್ ಮೇಲೆ ಮುದ್ರಿಸುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಲಾಗಿದೆ. ಈ ಹಿಂದೆ ಡಾ.ರಾಜ್​ಕುಮಾರ್ ಅವರು ಕೂಡ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಹಾಗೂ ಯಾವುದೇ ಸಂಭಾವನೆ ಪಡೆಯದೆ ರೈತರ ಪರ ನಿಂತಿದ್ದರು. ಹಾಗೇ ತಂದೆಯ ಆದರ್ಶವನ್ನು ಪಾಲಿಸುತ್ತಾ ಬಂದ ಪುನೀತ್ ರಾಜ್​ಕುಮಾರ್ ಅವರು ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್​ ನಂದಿನಿ ಹಾಲಿನ ರಾಯಭಾರಿಯಾಗಿದ್ದರು.

ವರ್ಷದ ಕೊನೆಯ ದಿನದಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನು ಮುದ್ರಿಸುವ ಮೂಲಕ ಕೆಎಂಎಫ್ ವಿಶೇಷ ಗೌರವ ಸಲ್ಲಿಸಿದೆ. ಇದರಿಂದ ಕೋಟ್ಯಂತರ ಅಭಿಮಾನಿಗಳಿಗೆ ಬಹಳ ಸಂತೋಷವಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles