Wednesday, June 18, 2025

ಶ್ರೀಲಂಕನ್ನರು ಭಾರತಕ್ಕೆ ನುಸುಳುವ ಸಾಧ್ಯತೆ: ಸ್ಥಳಿಯರಿಗೆ ಕಟ್ಟೆಚ್ಚರ ವಹಿಸಲು ಸೂಚನೆ

ಮಂಗಳೂರು: ಶ್ರೀಲಂಕಾ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಒಂದೊತ್ತಿನ ಊಟಕ್ಕೂ ಜನ ಪರದಾಡುತ್ತಿದ್ದಾರೆ. ದೇಶದಲ್ಲಿ ಅರಾಜಕತೆ ಉಂಟಾಗಿದ್ದು, ಆಹಾರ ಪದಾರ್ಥಗಳಿಗಾಗಿ ದೊಂಬಿ-ಕಲಹ ಹೆಚ್ಚಾಗಿದೆ. ಅಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಜನ ಸಮುದ್ರ ಮುಖೇನ ಹಾಗೂ ಇನ್ನಿತರ ಮಾರ್ಗಗಳ ಮುಖಾಂತರ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಸ್ಥಳೀಯರಿಗೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ಪ್ರಕಟಣೆ ಹೊರಡಿಸಿದೆ.
ಅಪರಿಚಿತ ವ್ಯಕ್ತಿಗಳಿಗೆ ಮನೆಯನ್ನು ಬಾಡಿಗೆಗೆ ನೀಡಬೇಡಿ. ಬಾಡಿಗೆ ನೀಡುವಾಗ ಅವರ ಪೂರ್ವಪರವನ್ನು ಸರಿಯಾಗಿ ತಿಳಿದುಕೊಳ್ಳಿ. ಅಲ್ಲದೆ ಸೂಕ್ತ ದಾಖಲಾತಿಗಳನ್ನು ಪಡೆದು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಕರಾವಳಿ ಕಾವಲು ಪೊಲೀಸ್ ಠಾಣೆಯ ನಿರೀಕ್ಷಕರು ಮನವಿ ಮಾಡಿದ್ದಾರೆ.

ಚೆನ್ನೈ ಮೂಲಕ ಮಂಗಳೂರಿಗೆ ಬಂದು ಅಕ್ರಮವಾಗಿ ವಾಸವಿದ್ದ ಶ್ರೀಲಂಕಾದ 12 ಪ್ರಜೆಗಳನ್ನು 2021ರ ಜೂನ್‌ನಲ್ಲಿ ಪತ್ತೆ ಹಚ್ಚಿ ತನಿಖೆಯನ್ನು ಎನ್‌ಐಗೆ ವಹಿಸಲಾಗಿತ್ತು

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles