Sunday, June 8, 2025

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ

ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಮುಂಡ್ಕೂರಿನ ಜೈನ ಪೇಟೆ ಬಳಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟವು ಮಂಗಳವಾರ ನಡೆಯಿತು.

ಪಂದ್ಯಾಟವನ್ನು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ರಾಮದಾಸ ಆಚಾರ್ಯ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭ ಮುಂಡ್ಕೂರು ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ದೇವಪ್ಪ ಸಪಲಿಗ, ಸಂದೀಪ್ ಶೆಟ್ಟಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಪ್ರಬಂಧಕ ಅರುಣ್ ರಾವ್, ಇಸ್ಮಾಯಿಲ್, ಮುಂಡ್ಕೂರು ಹೆಗ್ಡೆ ಕಾಂಪ್ಲೆಕ್ಸ್ ಮಾಲಕ ಉದಯ ಹೆಗ್ಡೆ ಹಾಗೂ ಉದಯಕುಮಾರ್ ಉಪಸ್ಥಿತರಿದ್ದರು.

ಗಿರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles