Sunday, June 8, 2025

ಹಿಜಾಬ್ ತೀರ್ಪಿಗೆ ಅಸಮಾಧಾನ: ಮಂಗಳೂರಿನಲ್ಲಿ ಬಂದ್‌ಗೆ ಬೆಂಬಲ

ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಮುಸ್ಲಿಂ ಸಂಘಟನೆಗಳು ನೀಡಿರುವ ಬಂದ್‌ ಕರೆಗೆ ಮಂಗಳೂರಿನ ಮುಸ್ಲಿಂ ವರ್ತಕರ ಅಂಗಡಿಗಳನ್ನು ಮುಚ್ಚಲಾಗಿತ್ತು.

ಮಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಸಂಪೂರ್ಣ ಸ್ತಬ್ಧವಾಗಿದೆ. ಮುಸ್ಲಿಂ ವ್ಯಾಪಾರಸ್ಥರು ದಿನಸಿ ಸೇರಿ ಹಲವಾರು ಅಂಗಡಿಗಳನ್ನು ಮುಚ್ಚಲಾಗಿತ್ತು. ನಗರದ ಪ್ರಮುಖ ವ್ಯಾಪಾರಿ ಕೇಂದ್ರ ಬಂದರು‌ ಪ್ರದೇಶ ಭಾಗಶಃ ಬಂದ್ ಆಗಿದೆ.

ಬಹುತೇಕ ಮುಸ್ಲಿಂ ವ್ಯಾಪಾರಸ್ಥರೇ ವಹಿವಾಟು ನಡೆಸುವ ಮಂಗಳೂರಿನ ಬಂದರು ಪ್ರದೇಶದಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಗೂ ದಿನಸಿ ಸಾಮಾಗ್ರಿ ರಫ್ತಾಗುತ್ತದೆ. ಬಂದರಿಗೆ ಮುಸ್ಲಿಂ ದಿನಗೂಲಿ ಕಾರ್ಮಿಕರು ಬಾರದ ಕಾರಣ ಅರ್ಧದಷ್ಟು ವಹಿವಾಟು ಸ್ಥಗಿತವಾಗಿದೆ. ಉಳಿದಂತೆ ಜಿಲ್ಲೆಯ ಹಲವೆಡೆ ವ್ಯಾಪಾರ ವಹಿವಾಟು ಯಥಾಸ್ಥಿತಿ ಇದ್ದು, ಮುಸ್ಲಿಮರು ಮಾತ್ರ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles