ಕಾರ್ಕಳ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸದಸ್ಯತ್ವ ನೋಂದಾವಣೆ ಅಭಿಯಾನ ಕಾರ್ಯಕ್ರಮದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಕೋ-ಆರ್ಡಿನೇಟರ್ ಆಗಿ ಕಾರ್ಕಳದ ಸುರೇಂದ್ರ ಶೆಟ್ಟಿ ಹಾಗೂ ಬಂಟ್ವಾಳದ ಅಶ್ವಿನ್ ಕುಮಾರ್ ರೈ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಮಾನ್ಯ ಡಾ.ಎಂ.ವೀರಪ್ಪ ಮೊಯ್ಲಿಯವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೋ-ಆರ್ಡಿನೇಟರ್ ನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.