ಕಾರ್ಕಳ: ಕುಕ್ಕುಂದೂರು ಜೋಡುರಸ್ತೆಯ ಪ್ರೈಮ್ ಮಾಲ್ನ ಒಂದನೇಯ ಮಹಡಿಯಲ್ಲಿ ಪ್ರಾರಂಭಿಸಲಾದ ಬಂಟ್ಸ್ ಕ್ರೆಡಿಟ್ ಕೋ ಆಪರೆಟಿವ್ ಸೊಸೈಟಿಯ ಉದ್ಘಾಟನೆ ಮಾಡಿ ಬಳಿಕ ಉಷಾ ಸೆಲೆಬ್ರೇಶನ್ ಹಾಲ್ನಲ್ಲಿ ಜರುಗಿದ್ದ ಸಮಾರಂಭದಲ್ಲಿ ಕೇಮಾರು ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಮಾರು ಈಶ ವಿಠಲದಾಸ ಸ್ವಾಮೀಜಿ ಅವರು ಪ್ರಮಾಣಿಕತೆ, ದಕ್ಷತೆ, ವಿಶ್ವಾರ್ಹತೆ, ಕ್ರಿಯಾಶೀಲತೆ ಹೊಂದಿರುವ ಬಂಟ ಸಮುದಾಯವು ನಾಡಿನ ಸಂಸ್ಕೃತಿ ಇದ್ದಂತೆ. ಈ ಸಂಸ್ಕೃತಿಯಿಂದ ಸಮಾಜದಲ್ಲಿ ಉತ್ಸವಗಳು ಮೂಡಿಬರುತ್ತವೆ ಹಾಗೂ ಸಮಾಜದಲ್ಲಿ ಎಲ್ಲರನ್ನು ಒಗ್ಗೂಡಿಸಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಬಂಟ್ಸ್ ಕ್ರೆಡಿಟ್ ಕೋ ಆಪರೆಟಿವ್ ಸೊಸೈಟಿ ಹೊಸ ಆಶಯವನ್ನು ಹುಟ್ಟು ಹಾಕಿದೆ. ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಸೇವೆ ನೀಡಲು ಸಿದ್ಧವಾಗಿದೆ. ಹಣ ಹೂಡಿಕೆ, ಸಾಲ ಸೌಲಭ್ಯ ವ್ಯವಹಾರಗಳ ಲಾಭವನ್ನು ಜನರು ಪಡೆಯಬೇಕೆಂದು ಕೋರಿದರು.
ಸಭೆಯಲ್ಲಿ ಪ್ರಗತಿಪರ ಹಿರಿಯ ಕೃಷಿಕ ಅಶೋಕ್ ಅಡ್ಯಂತಾಯ, ಕರ್ನಾಟಕ ಗೇರು ಬೀಜ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರ್ನಾಟಕ ರಾಜ್ಯ ಸೌಹಾರ್ದ ಮಹಾಮಂಡಲದ ನಿರ್ದೇಶಕ ಬೋಳ ಸದಾಶಿವ ಶೆಟ್ಟಿ ಬೋಳ, ಕಾರ್ಕಳ ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸವಿತಾ ವಿಜಯ ಶೆಟ್ಟಿ, ಸಾಣೂರು ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಬಜಗೋಳಿ ಬಂಟರ ಸಂಘದ ಅಧ್ಯಕ್ಷ ಶ್ಯಾಮ ಶೆಟ್ಟಿ, ಕುಕ್ಕುಂದೂರು ಬಂಟರ ಸಂಘದ ಅಧ್ಯಕ್ಷ ಭರತ್ ಶೆಟ್ಟಿ, ಉದ್ಯಮಿಗಳಾದ ಗುರ್ಮೆ ಸುರೇಶ್ ಶೆಟ್ಟಿ, ಶೋಧನ್ ಕುಮಾರ್ ಶೆಟ್ಟಿ, ಕೆ. ಚಂದ್ರಶೇಖರ ಮಾಡ, ಯತಿರಾಜ್ ಶೆಟ್ಟಿ, ವಕೀಲ ಸುನೀಲ್ ಕುಮಾರ್ ಶೆಟ್ಟಿ, ಕೃಷಿಕ ಜಗದೀಶ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿದ್ದರು.
ಕಾರ್ಯಕ್ರಮದಲ್ಲಿ ನಿದೇಶಕರಾದ ಸುಹಾಸ್ ಕುಮಾರ್ ಹೆಗ್ಡೆ, ಜಾರ್ಕಳ ಸುಧೀರ್ ಹೆಗ್ಡೆ, ಸುರೇಂದ್ರ ಶೆಟ್ಟಿ, ಪ್ರಶಾಂತ ಶೆಟ್ಟಿ, ಕೆ.ನವೀನ್ ಚಂದ್ರ ಶೆಟ್ಟಿ, ರಮೇಶ್ ಶೆಟ್ಟಿ, ರಾಮಲೇಖ ಎನ್.ರೈ, ಸುಧಾಕರ ಶೆಟ್ಟಿ, ಸಚೀಂದ್ರ ಶೆಟ್ಟಿ, ಎಂ.ಪ್ರಸನ್ನ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಸುನೀತಾ ಸಿರಿಯಣ್ಣ ಶೆಟ್ಟಿ, ವಿನಯ ಅರುಣ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಾಯಿನಾಥ ಶೆಟ್ಟಿ ಮುಂಡ್ಕೂರು ನಿರೂಪಿಸಿ, ವಂದನಾ ರೈ ಪ್ರಾರ್ಥಿಸಿ, ಸೊಸೈಟಿಯ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಸ್ವಾಗತಿಸಿದರು. ಹಾಗೂ ಉಪಾಧ್ಯಕ್ಷ ಕೆ.ಮಂಜುನಾಥ ಶೆಟ್ಟಿ ಬೈಲೂರು ಪ್ರಸ್ತಾವಿಕವಾಗಿ ಮಾತನಾಡಿದರು.