Sunday, June 8, 2025

ಪಾರದರ್ಶಕವಾಗಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿದ್ದೇವೆ: ಸಚಿವ ಸಿ.ಎನ್.ಅಶ್ವತ್ ನಾರಾಯಣ

ಹೆಬ್ರಿ: ಪಾರದರ್ಶಕವಾಗಿ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸಿದ್ದೇವೆ. ಮುಂದೆ ಉಪನ್ಯಾಸಕರ ನೇಮಕಾತಿ ನಡೆಯಲಿದ್ದು ಆಸಕ್ತರು ಆರ್ಹತೆಯನುಸಾರ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ ನಾರಾಯಣ ಹೇಳಿದರು.

ಅವರು ಬುಧವಾರ ಬೇಳಂಜೆಯ ಮಲ್ಲಿಕಾರ್ಜುನ ದೇವಸ್ಥಾನದ ವಾರ್ಷಿಕ ರಥೋತ್ಸವಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅತಿಥಿ ಉಪನ್ಯಾಸಕರಿಗೆ ಅತೀ ಕಡಿಮೆ ಗೌರವಧನ‌ವಿತ್ತು. ಈಗ ಸುಮಾರು 32 ಸಾವಿರ ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎನ್‌ಐಸಿ ಮಾರ್ಗಸೂಚಿ ವ್ಯವಸ್ಥೆಯ ಪ್ರಕಾರ ಅತ್ಯುತ್ತಮವಾಗಿ ನಿರ್ವಹಿಸಿದ ಹೆಮ್ಮೆ ಇದೆ ಎಂದರು.

ಉಕ್ರೇನ್‌ನಲ್ಲಿ ಮೃತರಾದ ನವೀನ್ ಮೃತದೇಹ ರಾಜ್ಯಕ್ಕೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರವು ನವೀನ್ ಕುಟುಂಬದ ಜೊತೆ ಇದೆ. ಬೇರೆ ದೇಶಕ್ಕೆ ಹೊಲಿಸಿದರೆ ಭಾರತದ ಪ್ರಜೆಗಳನ್ನು ಸ್ವದೇಶಕ್ಕೆ ಕರೆ ತರುವಲ್ಲಿ ನಾವು ಮುಂಚೂಣಿಯಲ್ಲಿ ಇದ್ದೇವೆ. 19600 ಭಾರತೀಯ ಪ್ರಜೆಗಳನ್ನು ಭಾರತಕ್ಕೆ ಕರೆತರಲು ನರೇಂದ್ರ ಮೋದಿ ನೇತ್ರತ್ವದಲ್ಲಿ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಗಣೇಶ ಹೆಗ್ಡೆ, ಅರ್ಚಕರಾದ ಹೇರ್ಗ ರಾಘವೇಂದ್ರ ತಂತ್ರಿ, ರಂಗನಾಥ ಭಟ್, ಹೆಬ್ರಿ ತಹಶೀಲ್ಧಾರ್ ಪುರಂದರ್ ಎಸ್, ತಾ.ಪಂ. ಮಾಜಿ ಸದಸ್ಯ ಅಮೃತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles