Sunday, June 8, 2025

ನವೀನ್ ಮೃತದೇಹ ತರುವುದು ಸರ್ಕಾರದ ಮೊದಲ ಆದ್ಯತೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್ ವಿರುದ್ಧ ರಷ್ಯಾ ಸೇನೆಯ ಶೆಲ್ ದಾಳಿಯಲ್ಲಿ ಮೃತಪಟ್ಟ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಜ್ಞಾನ ಗೌಡರ್ ಅವರ ಮೃತದೇಹವನ್ನು ಕರೆತರುವುದು ಸರ್ಕಾರದ ಮೊದಲ ಆದ್ಯತೆ. ಸರ್ಕಾರ ಈ ವೇಳೆ ನವೀನ್‌ ಕುಟುಂಬದವರ ಜೊತೆ ಬೆಂಗಾವಲಾಗಿ ನಿಲ್ಲುತ್ತದೆ. ಸರ್ಕಾರ ಖಂಡಿತವಾಗಿಯೂ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನವೀನ್ ಮೃತದೇಹವನ್ನು ವಿದೇಶಾಂಗ ಸಚಿವಾಲಯದ ಜೊತೆ, ವಿದೇಶಾಂಗ ಸಚಿವರ ಜೊತೆ ಹಾಗೂ ಭಾರತೀಯ ರಾಯಭಾರಿ ಜೊತೆ ಮಾತನಾಡಿ ಊರಿಗೆ ತರುವ ಪ್ರಯತ್ನ ಮಾಡುತ್ತೇವೆ. ಉಕ್ರೇನ್ ನಲ್ಲಿರುವ ಭಾರತೀಯರನ್ನು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸುಮಾರು 26 ವಿಮಾನಗಳಲ್ಲಿ ಕರೆತರುವ ಪ್ರಯತ್ನವಾಗುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಜೊತೆಗೆ ಕನ್ನಡಿಗರನ್ನು ಕರೆತರುವ ಪ್ರಯತ್ನ ಮಾಡಲಿದೆ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles