ಮಂಗಳೂರು: ಕರ್ನಾಟಕ ರಾಜ್ಯಪಾಲರು ದ.ಕ. ಉಡುಪಿ ಜಿಲ್ಲೆಗಳಿಗೆ ಸೋಮವಾರ ಪ್ರವಾಸ ಕೈಗೊಂಡಿದ್ದಾರೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಡಳಿತ ಸ್ವಾಗತಿಸಿದ್ದು, ಈ ಸಂದರ್ಭ ಜಿ.ಪಂ. ಸಿ.ಇ.ಒ ಡಾ ಕುಮಾರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ರಾಜ್ಯಪಾಲರು ಮಧ್ಯಾಹ್ನ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಗೋಕರ್ಣನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರಿಗೆ ಶಾಲು, ಫಲಪುಷ್ಪ,ದೇವರ ವಿಗ್ರಹ ನೀಡಿ ವಿಶೇಷ ಗೌರವ ಸಲ್ಲಿಸಲಾಯಿತು.
ರಾಜ್ಯಪಾಲರು ಸಂಜೆ ಮೂಡಬಿದರೆಯ ಸಾವಿರ ಕಂಬದ ಬಸದಿಗೆ, ಹಾಗೂ ಕಾರ್ಕಳ ಉತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಲಿದ್ದಾರೆ.