Sunday, June 8, 2025

ಉಡುಪಿ: ಕೊರಗರ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಸಮಾರೋಪ ಸಮಾರಂಭ; ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಣೆ

ಉಡುಪಿ: ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಕೊರಗರ ಸಂಘಟನೆ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಜಿಲ್ಲಾಮಟ್ಟದ ಕೊರಗರ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು.

ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್ ಹಿಂದುಳಿದ ಸಮಾಜ ಅಭಿವೃದ್ಧಿ ಆಗಬೇಕಾದರೆ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಸಿಗಬೇಕು. ಕೊರಗ ಸಮುದಾಯಕ್ಕೆ ಪರಿಪೂರ್ಣ ವಿದ್ಯಾಭ್ಯಾಸ ಸಿಕ್ಕಿದರೆ, ಸಮುದಾಯ ಸಮಗ್ರ ಅಭಿವೃದ್ಧಿ ಸಾಧ್ಯ. ಕೊರಗ ಸಮುದಾಯಕ್ಕೂ ರಾಜಕೀಯ ಅಸ್ಥಿತ್ವದ ಅಗತ್ಯವಿದೆ. ಹೀಗಾಗಿ ನಾಯಕರನ್ನು ಬೆಳೆಸುವ ಕೆಲಸ ಆಗಬೇಕು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್, ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಐ.ಟಿ.ಡಿ.ಪಿ ಅಧಿಕಾರಿ ದೂದ್ ಪೀರ್, ಸಬಿತಾ ಗುಂಡ್ಮಿ, ಕೊರಗ ಸಮುದಾಯದ ಮುಖಂಡರಾದ ಬೊಗ್ರ ಕೊರಗ, ಗಣೇಶ್, ರವಿ ಅಲೆವೂರು, ಬಾಬು ಪಾಂಗಾಳ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles