Sunday, June 8, 2025

ಉಡುಪಿ: ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಪಥಸಂಚಲನ

ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಹಾಗೂ ಶಿವಮೊಗ್ಗ ಗಲಭೆಯ ಹಿನ್ನಲೆಯಲ್ಲಿ ನಗರದ ಜನರಿಗೆ ಧೈರ್ಯ ಮೂಡಿಸುವ ಸಲುವಾಗಿ ಬುಧವಾರ ಪೊಲೀಸ್ ಪಥಸಂಚಲನ ಮಾಡಿದರು.

ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ 90 ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಮತ್ತು ಇನ್ನೂರಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬ್ಬಂದಿ ಪಥಸಂಚಲನ ಮಾಡಿದರು.

ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸಾರ್ವಜನಿಕರಿಗೆ ನಾವಿದ್ದೇವೆಂಬ ಭರವಸೆ ಮೂಡಿಸುವ ಸಲುವಾಗಿ ಪಥಸಂಚಲನ ನಡೆಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ ಕದಡುವಂತಹ ಸಂಘಟನೆಗಳಿಗೆ ಎಚ್ಚರಿಕೆ ನೀಡಿ, ಜನರಿಗೆ ಕಾನೂನು ಸುವ್ಯವಸ್ಥೆಗಳ ಬಗ್ಗೆ ಆತಂಕಬೇಡ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles