Tuesday, June 17, 2025

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ, ಶಾಲಾಭಿವೃದ್ಧಿ ಸಮಿತಿಗೆ ಇದರ ಹೊಣೆ:ಬಿ.ಸಿ.ನಾಗೇಶ್

ಪುತ್ತೂರು: ಶಿಕ್ಷಣ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಇತ್ತೀಚಿನ ದಿನಗಳಲ್ಲಿ ಶಾಲಾ ಪಠ್ಯ ಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು, ಬಸವಣ್ಣ ಪಠ್ಯಗಳನ್ನು ತೆಗೆದು ಹಾಕಲಾಗಿದೆ ಎಂದು ಸುಳ್ಳು ಹರಡುವ ಕಾರ್ಯ ಮಾಡುತ್ತಿದೆ. ಆದರೆ ಯಾವ ಪಠ್ಯವನ್ನೂ ತೆಗೆದು ಹಾಕಿಲ್ಲ. ಮಕ್ಕಳಿಗೆ ಹೊರೆಯಾಗದಿರಲಿ ಎನ್ನುವ ಕಾರಣಕ್ಕೆ ಪಠ್ಯದಲ್ಲಿ ಕೊಂಚ ಬದಲಾವಣೆಗಳನ್ನು ಮಾಡಲಾಗಿದೆ. ಕಾಂಗ್ರೆಸ್‌ನ ಸುಳ್ಳು ಆರೋಪಕ್ಕೆ ಪಠ್ಯ ಪುಸ್ತಕ ಹೊರಗೆ ಬಂದ ಬಳಿಕ ಉತ್ತರ ಸಿಗಲಿದೆ ಎಂದರು.
ರಾಜ್ಯ ಹಾಗೂ ದೇಶವ್ಯಾಪಿ ಚರ್ಚೆಗೆ ಒಳಗಾಗಿದ್ದ ಸಮವಸ್ತ್ರ ವಿವಾದ ವಿಚಾರವಾಗಿ ಮಾತನಾಡಿದ ಅವರು, ಈ ವಿವಾದಕ್ಕೆ ಮತ್ತೆ ಅವಕಾಶ ನೀಡದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಶಾಲಾಭಿವೃದ್ಧಿ ಸಮಿತಿಗೆ ಸಮವಸ್ತ್ರದ ಕುರಿತು ಕ್ರಮ ತೆಗೆದುಕೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ. ಫ್ರೌಢ ಶಾಲೆ ತನಕ ಸರ್ಕಾರವೇ ಮಕ್ಕಳಿಗೆ ಸಮವಸ್ತ್ರ ವಿತರಿಸುವ ವ್ಯವಸ್ಥೆಯನ್ನು ಮಾಡಲಿದೆ. ಈ ಬಾರಿ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಸಮವಸ್ತ್ರ ವಿತರಣೆಯಲ್ಲಿ ಕೊಂಚ ತಡವಾಗುವ ಸಾಧ್ಯತೆಯಿದೆ. ಆದರೆ ಈ ಬಾರಿ ಪಠ್ಯ ಪುಸ್ತಕವನ್ನು ಶಾಲೆ ಆರಂಭಗೊAಡ ತಿಂಗಳ ಒಳಗೆ ವಿತರಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.
ಅಲ್ಲದೆ ಈ ಬಾರಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲೆ ಆರಂಭದAದೇ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದ್ದು, 15 ಸಾವಿರ ಹೊಸ ಶಿಕ್ಷಕರನ್ನು ನೇಮಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊAಡಿದೆ. ಪ್ರಕೃತಿ ವಿಕೋಪ ಹಾಗೂ ಇತರ ಸಮಸ್ಯೆಗಳಿಂದಾಗಿ ಹಾನಿಗೊಳಗಾದ ಶಾಲಾ ಕೊಠಡಿ ಹಾಗೂ ಕಟ್ಟಡಕ್ಕಾಗಿ ಈ ಬಾರಿ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕೆಲವು ಶಾಲೆಗಳಲ್ಲಿ ಅಧ್ಯಾಪಕರೂ ಸಮವಸ್ತ್ರವನ್ನು ಧರಿಸುತ್ತಿದ್ದು, ಇಂಥ ಶಾಲೆಗಳೂ ಅತ್ಯುತ್ತಮವಾಗಿ ನಡೆಯುತ್ತಿದೆ ಎಂದರು.
ಪುತ್ತೂರಿನ ಹಾರಾಡಿ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮೆಕಾಲೆ ಶಿಕ್ಷಣ ಪದ್ಧತಿ ಮಕ್ಕಳನ್ನು ಕೇವಲ ಉದ್ಯೋಗದ ಪ್ರಾಡಕ್ಟ್ ಆಗಿ ರೂಪಿಸುತ್ತಿದೆ. ಈ ವ್ಯವಸ್ಥೆಯನ್ನು ಬದಲಾಯಿಸುವ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಆ ಮೂಲಕ ಮಕ್ಕಳಿಗೆ ಶಿಕ್ಷಣದಲ್ಲಿ ಅವಕಾಶ ಹಾಗೂ ಮಕ್ಕಳನ್ನು ಕೇಂದ್ರೀಕರಿಸಿ ಹೊಸ ಶಿಕ್ಷಣ ನೀತಿಯನ್ನು ತಯಾರು ಮಾಡಲಾಗಿದೆ. ಮೆಕಾಲೆ ಶಿಕ್ಷಣದಲ್ಲಿ ಕೇವಲ ಉದ್ಯೋಗ ಸೃಷ್ಟಿಸುವ ಬದಲು, ಮಗುವಿನ ಆಲೋಚನೆಗೆ ಬೇಕಾದ ಅವಕಾಶಗಳನ್ನು ಹೊಸ ಶಿಕ್ಷಣ ನೀತಿಯಲ್ಲಿ ಮಾಡಲಾಗಿದೆ. ಡಿಮ್ಯಾಂಡ್ ಮೇಲೆ ಇಂದು ಶಿಕ್ಷಣ ವ್ಯವಸ್ಥೆಯಿದೆ. ಮಕ್ಕಳಿಗೆ ತಮಗೆ ಏನು ಬೇಕು. ಅನ್ನೋದು ಗೊತ್ತಿಲ್ಲ. ಮಕ್ಕಳಿಗೆ ಬೇಕಾದ ವ್ಯವಸ್ಥೆಯನ್ನು ಶಿಕ್ಷಣ ವ್ಯವಸ್ಥೆ ನಿರ್ಮಾಣ ಮಾಡಿಲ್ಲ. ಕೇವಲ ಉದ್ಯೋಗಕ್ಕಾಗಿ ಬೇಕಾದ ಒಂದು ಪ್ರಾಡಕ್ಟ್ ರೀತಿಯಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಈ ವ್ಯವಸ್ಥೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಇತಿಶ್ರೀ ಹಾಡಲಿದೆ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles