ಕುಂದಾಪುರ: ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಬ್ರಹ್ಮಕಲಶಾಭಿಷೇಕ ಎ.7 ರಿಂದ 11ರವರೆಗೆ ಜರುಗಲಿದ್ದು. ಈ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ರಮೇಶ ಕಾರಂತರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿದ್ದು, ರಥೋತ್ಸವ ಬ್ರಹ್ಮಕಲಶಾಭಿಷೇಕ ವಿಜ್ರಂಭಣೆಯಿಂದ ನಡೆಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮದ ನಿರ್ವಹಣೆಗೆ ಸಮಿತಿ ರಚನೆ ಮಾಡಿ ಅಧ್ಯಕ್ಷರನ್ನು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ರಾಜೇಶ್ ಕಾರಂತ್, ಭಾಸ್ಕರ್ ಕಾರಂತ್, ಆನಂದ್ ಬಿಲ್ಲವ ಹಾಗೂ ಈಶ್ವರ ಮಠ ಸಂಚಾಲಕರಾದ ಕೃಷ್ಣಮೂರ್ತಿ ಐತಾಳ್, ಪ್ರಸನ್ನ ಮಯ್ಯ ಉಪಸ್ಥಿತರಿದ್ದರು. ಸಭೆಯನ್ನು ಮಂಜುನಾಥ ಹೆಬ್ಬಾರ್ ಸ್ವಾಗತಿಸಿದರು.