Tuesday, June 10, 2025

ನಮ್ಮ ಮೇಲೆ ಪ್ರಭಾವಿ ಶಾಸಕರ ಒತ್ತಡ ಅಂತ ಏನೂ ಇಲ್ಲ: ಪ್ರಾಂಶುಪಾಲೆ ಡಾ.ಅನುಸೂಯ ರೈ

ಮಂಗಳೂರು: ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಸುಮಾರು 44 ಮುಸ್ಲಿಂ ಮಕ್ಕಳಿದ್ದು, ವಿವಾದ ಒಂದು ತಂಡದಿAದಷ್ಟೇ ಆಗಿದೆ. ಒಂದು 15 ಮಂದಿ ವಿದ್ಯಾರ್ಥಿಗಳಷ್ಟೇ ಹಿಜಾಬ್ ಕುರಿತು ಮಾತನಾಡ್ತಿದಾರೆ. ನಿನ್ನೆ ಅವರು ಬಂದಾಗ ನಾವೇ ಅವರನ್ನು ಹಿಜಾಬ್ ತೆಗೆದು ಬನ್ನಿ ಅಂತ ಕಳಿಸಿದ್ದೇವೆ ಎಂದು ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ನಿನ್ನೆಯೇ ಹಿಜಾಬ್ ತೆಗೆದು ಬನ್ನಿ ಎಂದು ಕಳುಹಿಸಿದ್ದೆವು. ಈ ಹಿನ್ನೆಲೆ ಅವರು ನಿನ್ನೆ ಡಿಸಿ ಕಚೇರಿಗೆ ಹೋಗಿದ್ದರು, ಆ 15 ಮಂದಿ ಇವತ್ತು ತರಗತಿಗೆ ಬಂದಿಲ್ಲ. ಅವರನ್ನ ಬಿಟ್ಟು ಉಳಿದ ಕೆಲ ಮಕ್ಕಳು ಹಿಜಾಬ್ ತೆಗೆದು ಕಾಲೇಜಿಗೆ ಬಂದಿದ್ದಾರೆ. ಕೆಲ ವಿದ್ಯಾರ್ಥಿಗಳು ಹೈ ಕೋರ್ಟ್ ತೀರ್ಪಿನ ಬಳಿಕ ಕಾಲೇಜಿಗೆ ಬರುತ್ತಿಲ್ಲ. ಒಂದು ಮೂರ್ನಾಲ್ಕು ವಿದ್ಯಾರ್ಥಿಗಳು ಟಿಸಿ ತೆಗೆದುಕೊಂಡು ಹೋಗಿದ್ದಾರೆ. ಆದರೆ ಇದು ಎಲ್ಲಾ ವಿದ್ಯಾರ್ಥಿಗಳ ಸಮಸ್ಯೆ ಅಲ್ಲ, ಕೆಲ 15 ವಿದ್ಯಾರ್ಥಿಗಳ ಸಮಸ್ಯೆ ಅಷ್ಟೇ ಎಂದಿದ್ದಾರೆ.
ಇನ್ನು, ನಿನ್ನೆ ಕೆಲವು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಈ ಕಾಲೇಜನ್ನು ಜೆಎನ್‌ಯು ಆಗಿ ಪರಿವರ್ತಿಸುವ ಶಂಕೆ ವ್ಯಕ್ತವಾಗುತ್ತಿದ್ದು, ಕಮೂನಿಸ್ಟ್ ಶಕ್ತಿಗಳು ಇದರಿಂದ ಸಕ್ರಿಯವಾಗಿವೆ. ಕೆಲ ಪ್ರಾಧ್ಯಾಪಕರು ಇದಕ್ಕೆ ಕೈ ಜೋಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಭಾವಿ ಶಾಸಕರ ಒತ್ತಡ ಅಂತ ಏನೂ ಇಲ್ಲ, ಅದು ಮಕ್ಕಳ ಆರೋಪ. ನನಗೆ ಎಲ್ಲಾ ಶಾಸಕರು ಕರೆ ಮಾಡಿ ಜೋರು ಮಾಡ್ತಿದಾರೆ, ಏನ್ ಆಗಿದೆ ಅಂತ. ಆದರೆ ಯಾವ ಶಾಸಕರೂ ಒತ್ತಡ ಹಾಕಿಲ್ಲ, ಅವರಿಗೂ ಅವರದ್ದೇ ಆದ ಪ್ರತಿಷ್ಠೆ ಇದೆ.
ಆ 15 ವಿದ್ಯಾರ್ಥಿಗಳು ಈ ವರ್ಷದಿಂದ ಆದೇಶ ಯಾಕೆ ಜಾರಿ ಮಾಡ್ತಿದೀರಿ ಅಂತಿದಾರೆ. ಕೋರ್ಟ್ ತೀರ್ಪಿನ ಮೊದಲು ನಮ್ಮ ಕಾಲೇಜಲ್ಲಿ ಶಿರವಸ್ತ್ರ ಹಾಕಲು ಅವಕಾಶ ಇತ್ತು. ಆದರೆ ತೀರ್ಪು ಬಂದ ಬಳಿಕ ಆನ್ ಲೈನ್ ತರಗತಿ ಇತ್ತು. ಆಫ್ ಲೈನ್ ಆದ ನಂತರ ಕೆಲ ವಿದ್ಯಾರ್ಥಿಗಳು ಹಿಜಾಬ್‌ಗೆ ವಿರೋಧ ಮಾಡಿದ್ದರು. ಹೀಗಾಗಿ ವಿವಿ ಸಿಂಡಿಕೇಟ್ ಸಭೆ ನಡೆಸಿ ಶಿರವಸ್ತ್ರವನ್ನ ಕಾಲೇಜು ನಿಯಮದಿಂದ ತೆಗೆಯಲಾಗಿದೆ. ಹಿಜಾಬ್ ಗೆ ಅವಕಾಶ ಇಲ್ಲ ಅಂತ ನೋಟೀಸ್ ಮಾಡಿದ್ರು ನಿನ್ನೆ ಕೆಲವರು ಬಂದಿದ್ದರು. ಹೀಗಾಗಿ ನಾನೇ ಅವರನ್ನು ವಾಪಸ್ ಕಳುಹಿಸಿ ಕೊಟ್ಟಿದ್ದೇವೆ. ನಿನ್ನೆ ಕೆಲ ಮಕ್ಕಳು ಕ್ಯಾಂಪಸ್‌ಗೂ ಹಿಜಾಬ್ ಬಿಡಬಾರದು ಅಂತ ಹೇಳಿದ್ದರು. ಕೊನೆಗೆ ಒತ್ತಾಯಕ್ಕೆ ಮಣಿದು ನಿನ್ನೆ ಕ್ಯಾಂಪಸ್ ನಲ್ಲೂ ನಿಷೇಧ ಮಾಡಲಾಗಿದೆ. ಇವತ್ತು ಕಾಲೇಜು ಯೂನಿಯನ್ ಅಧ್ಯಕ್ಷನ ಬದಲಾವಣೆಗೆ ಸಭೆ ಇದೆ. ವಿಸಿ ನೇತೃತ್ವದಲ್ಲಿ ಶಾಸಕರು ಕೂಡ ಈ ಸಭೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles