ಕುಂದಾಪುರ: ಸ್ನೇಹಿತರ ಜೊತೆ ಸಮುದ್ರಕ್ಕೆ ಗಾಳಕ್ಕಾಗಿ ತೆರಳಿದ ಯುವಕ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಸೋಮೇಶ್ವರ ಬಳಿ ಭಾನುವಾರ ಸಂಜೆ ನಡೆದಿದೆ.
ಮೃತ ವ್ಯಕ್ತಿಯನ್ನು ಬೈಂದೂರು ಬಿಜೂರು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ(23) ಎಂದು ಗುರುತಿಸಲಾಗಿದೆ. ನೀರು ಪಾಲಾದ ಶಶಿಧರ್ ರಕ್ಷಣೆಗೆ ಮೀನುಗಾರರು ಮುಂದಾದರೂ ಕೂಡ ಅವರನ್ನು ಬಚಾವ್ ಮಾಡಲು ಸಾಧ್ಯವಾಗಲಿಲ್ಲ.
ಶಶಿಧರ್ ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಬೈಂದೂರು ಸಿಪಿಐ ಸಂತೋಷ್ ಕಾಯ್ಕಿಣಿ ಹಾಗೂ ಠಾಣೆಯವರು ಭೇಟಿ ನೀಡಿದ್ದಾರೆ.